ಮಂಗಳೂರು: ಮಾರ್ಗನ್ಸ್ ಗೇಟ್ ಬಳಿ ಕಳೆದ ಕೆಲವು ದಿನಗಳ ಹಿಂದೆ ನಡೆದ ಶೂಟೌಟ್ ಪ್ರಜರಣದಲ್ಲಿ ಗಾಯಗೊಂಡಿದ್ದ ಉದ್ಯಮಿಯ ಪುತ್ರ ಸುಧೀಂದ್ರ ಇಂದು ಸಾವನ್ನಪ್ಪಿದ್ದಾನೆ.
ಏನಿದು ಘಟನೆ..?
ಮಂಗಳೂರಿನ ಮೋರ್ಗನ್ ಗೇಟ್ ಬಳಿ ಮಂಗಳವಾರ ಶೂಟೌಟ್ ನಡೆದಿದ್ದು ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಬಿದ್ದು ಅವಾಂತರಕ್ಕೆ ಕಾರಣವಾಗಿತ್ತು. ವೈಷ್ಣವಿ ಕಾರ್ಗೋ ಸಂಸ್ಥೆಯ ಕಚೇರಿ ಬಳಿ ಘಟನೆ ನಡೆದಿತ್ತು. ಸಂಸ್ಥೆಯ ಮಾಲೀಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರು ಸಂಬಳ ಕೇಳಲು ಬಂದಿದ್ದು ಆ ವೇಳೆ ಜಟಾಪಟಿ ನಡೆದಿದೆ ಎನ್ನಲಾಗಿದೆ. ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ.
ಕಚೇರಿ ಹೊರ ಭಾಗದಲ್ಲಿ ಘಟನೆ ನಡೆದಿದ್ದು ಎಸ್ಸೆಸ್ಸೆಲ್ಸಿ ಓದುತ್ತಿದ್ದ ಮಗ ಸುಧೀಂದ್ರನ ತಲೆಯ ಭಾಗಕ್ಕೆ ಗುಂಡು ಬಿದ್ದಿದ್ದು ಗಾಯಗೊಂಡಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕ ಸುಧೀಂದ್ರ ಇಂದು ಮೃತಪಟ್ಟಿದ್ದಾನೆ ಎನ್ನಲಾಗಿದೆ.