ಮಂಗಳೂರು; ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ ಪಾಲ್ಗೊಳ್ಳಬೇಕಾದ ಅಗತ್ಯವಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಅಪರ ಜಿಲ್ಲಾಧಿಕಾರಿ ಹಾಗೂ ಇಂಡಿಯನ್ ರೆಡ್ ಕ್ರಾಸ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಹಿರಿಯ ಸಲಹೆಗಾರ ಪ್ರಭಾಕರ ಶರ್ಮಾ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಿಭಾಗದ ಹಿರಿಯ ಪ್ರಬಂಧಕ ಎಡ್ರಿಚ್ ಡಿ’ಸೋಜ ,ಮುಖ್ಯ ಪ್ರಬಂಧಕ ಸತೀಶ್ ಪಾಟ್ಕರ್, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ದ.ಕ ಜಿಲ್ಲೆ ದೇವಿಕಾ ಯೋಗ ತರಬೇತಿ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ, ಇನ್ನರ್ ವ್ಹೀಲ್ ಕ್ಲಬ್ ಮಂಗಳೂರು ನಾರ್ತ್ ಅಧ್ಯಕ್ಷೆ ಗೀತಾ ಬಿ.ರೈ, ನಿಕಟ ಪೂರ್ವ ಅಧ್ಯಕ್ಷೆ ವಸಂತಿ ಕಾಮತ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸತೀಶ್ ಇರಾ ಸೇರಿ ದಂತೆ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ವಂದಿಸಿದರು.