ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಗೆದ್ದಿರುವ ನೂತನ ಶಾಸಕ ಬಸಬವನಗೌಡ ತುರುವಿಹಾಳ ಅವರು ಇಂದು ಬೆಂಗಳೂರಿನಲ್ಲಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಕೂಡಾ ಉಪಸ್ಥಿತರಿದ್ದರು. ಈ ನಾಯಕರು ಬಸವನಗೌಡ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ, ರಾಯಚೂರು ಜಿಲ್ಲೆಯ ಪಕ್ಷದ ಮುಖಂಡರು ಹಾಜರಿದ್ದರು.
© 2020 Udaya News – Powered by RajasDigital.