ಬೆಂಗಳೂರು: ಕೊರೋನಾ ಸೋಂಕು ಉಲ್ಬಣ ಹಿನ್ನೆಲೆಯಲ್ಲಿ ಹೈಕೋರ್ಟ್ನಲ್ಲಿನ ಬೆಳವಣಿಗೆ ಹಾಗೂ ಸರ್ಕಾರದ ಆದೇಶದ ಕಾರಣದಿಂದ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆಯನ್ನು ಕೊನೆಗೊಳಿಸಿದ್ದಾರೆ. ಆದರೆ ಕೊರೋನಾ ಸೋಂಕು ತಗ್ಗಿದ ಬಳಿಕ ಮತ್ತೆ ಪಾದಯಾತ್ರೆ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್ ಪಕ್ಷ ಅಧಿಕೃತವಾಗಿ ಹೇಳಿದೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್, ನಾಡಿನ ಹಿತಕ್ಕಾಗಿ, ಕುಡಿಯುವ ನೀರಿಗಾಗಿನ ನಮ್ಮ ಪಾದಯಾತ್ರೆಯನ್ನು ಬೆಂಬಲಿಸಿ ನಮ್ಮೊಂದಿಗೆ ಹೆಜ್ಜೆಹಾಕಿದ ಎಲ್ಲರಿಗೂ ಧನ್ಯವಾದ ಹೇಳಿದೆ. ನೀರಿಗಾಗಿನ ನಮ್ಮ ಹೋರಾಟವನ್ನು ತತ್ಕಾಲಿಕವಾಗಿ ಮುಂದೂಡಲಾಗಿದೆ. ಆದರೆ ಈ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಕರೋನಾ ನಿಯಂತ್ರಣಕ್ಕೆ ಬಂದ ನಂತರ ಪಾದಯಾತ್ರೆ ಮುಂದುವರಿಯಲಿದೆ ಎಂದೂ ಹೇಳಿದೆ.
ನಾಡಿನ ಹಿತಕ್ಕಾಗಿ, ಕುಡಿಯುವ ನೀರಿಗಾಗಿನ ನಮ್ಮ ಪಾದಯಾತ್ರೆಯನ್ನು ಬೆಂಬಲಿಸಿ ನಮ್ಮೊಂದಿಗೆ ಹೆಜ್ಜೆಹಾಕಿದ ಎಲ್ಲರಿಗೂ ಧನ್ಯವಾದಗಳು.
ನೀರಿಗಾಗಿನ ನಮ್ಮ ಹೋರಾಟವನ್ನು ತತ್ಕಾಲಿಕವಾಗಿ ಮುಂದೂಡಲಾಗಿದೆ. ಆದರೆ ಈ ಹೋರಾಟಕ್ಕೆ ಕಾಂಗ್ರೆಸ್ ಪಕ್ಷ ಬದ್ಧವಾಗಿದೆ.
ಕರೋನಾ ನಿಯಂತ್ರಣಕ್ಕೆ ಬಂದ ನಂತರ ಪಾದಯಾತ್ರೆ ಮುಂದುವರಿಯಲಿದೆ.#MekedatuPadayatre pic.twitter.com/G9F71Mg6Yk
— Karnataka Congress (@INCKarnataka) January 13, 2022