ಮೈಸೂರು: ಟಿಪ್ಪು ಸುಲ್ತಾನ್ ಅವರ ತಲೆ ತೆಗೆದಂತೆ ಸಿದ್ದರಾಮಯ್ಯ ಅವರನ್ನು ಹೊಡೆಯಬೇಕು ಎಂಬ ಸಚಿವ ಅಶ್ವತ್ಥ್ ನಾರಾಯಣ ಅವರ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ಹೊರಹಾಕಿದ್ದಾರೆ. ಸಚಿವ ಅಶ್ವಥ್ ನಾರಾಯಣ್ ಅವರ ಹೇಳಿಕೆ ಬಗ್ಗೆ ಬೊಮ್ಮಾಯಿ, ಯಡಿಯೂರಪ್ಪನವರು, ನಡ್ಡಾ ಅವರು ಉತ್ತರ ನೀಡಬೇಕು ಎಂದು ಡಿಕೆಶಿ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಅವರು, ‘ಸಿದ್ದರಾಮಯ್ಯನವರೇನು ಕುರಿಯೇ? ಇತಿಹಾಸದಲ್ಲಿ ಟಿಪ್ಪು ಅವರ ತಲೆ ತೆಗೆದಿರುವ ಬಗ್ಗೆ ದಾಖಲೆ ಎಲ್ಲಿವೆ? ಎಂದು ಪ್ತಶ್ನಿಸಿದರಲ್ಲದೆ, ನಾನು ಅಶ್ವತ್ಥ್ ನಾರಾಯಣ ಅವರಿಗೆ ಉತ್ತರವನ್ನು ನೀಡುವುದಿಲ್ಲ, ಅವರ ಹೇಳಿಕೆ ಖಂಡಿಸುವುದಿಲ್ಲ. ಅವರ ಹೇಳಿಕೆಗೆ ಬೊಮ್ಮಾಯಿ, ಯಡಿಯೂರಪ್ಪನವರು, ನಡ್ಡಾ ಅವರು ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.
ನಾನು ಆ ವ್ಯಕ್ತಿಯ ಬಗ್ಗೆ ಮಾತನಾಡಿ ನನ್ನ ಬಾಯಿ ಕೊಳಕು ಮಾಡಿಕೊಳ್ಳು ಇಚ್ಛಿಸುವುದಿಲ್ಲ ಎಂದು ಅಶ್ವಥ್ ನಾರಾಯಣ್ ಅವರನ್ನು ಕೆಣಕಿದರು. ಇನ್ನು ಟಿಪ್ಪು ಅವರ ವಿಚಾರದಲ್ಲಿ ರಾಷ್ಟ್ರಪತಿಗಳು ಬಂದು ಏನು ಮಾತನಾಡಿದ್ದಾರೆ ಎಂಬ ದಾಖಲೆಗಳಿವೆ’ ಎಂದರು.