ಏಕಾಏಕಿ ಸಿಲಿಂಡರ್ ಸ್ಫೋಟ.. ಕಾರ್ಮಿಕರಿಬ್ಬರ ದುರ್ಮರಣ.. ಸುಟ್ಟು ಕರಕಲಾದ ಘಟಕ..
ಬೆಂಗಳೂರು: ರಾಜಧಾನಿಯ ಮಾಗಡಿ ರಸ್ತೆಯಲ್ಲಿರುವ ಕುರುಕುಲು ತಿಂಡಿ ತಯಾರಿಸುವ ಕಾರ್ಖಾನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಇಬ್ಬರು ಸಾವನ್ನಪ್ಪಿದ್ದಾರೆ.
ಮಾಗಡಿ ರಸ್ತೆಯಲ್ಲಿರುವ ಕುರುಕುರೆ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ವಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.