ಬೆಂಗಳೂರು: ರಾಜಧಾನಿ ಹೊರವಲಯದ ಆನೇಕಲ್ ಬಳಿ ಪುರಸಭಾ ಸದಸ್ಯರನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ್ದಾರೆ.
ಅನೇಕಲ್ ಬಳಿ ಹೊಸೂರು ಮುಖ್ಯರಸ್ತೆಯಲ್ಲಿ ಬುಧವಾರ ಹಂತಕರ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಆನೇಕಲ್ ಪುರಸಭಾ ಸದಸ್ಯ ರವಿ ಅಲಿಯಾಸ್ ಸ್ಕ್ರಾಪ್ ರವಿ ಎಂಬವರನ್ನು ಕೊಲೆ ಮಾಡಿದೆ.
ಹಳೇ ವೈಷಮ್ಯ ಹಿನ್ನೆಲೆ ದುಷ್ಕರ್ಮಿಗಳು ಈ ಕೊಲೆ ನಡೆಸಿರಬಹುದೆಂದು ಪೊಕೀಸರು ಶಂಕಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಆನೇಕಲ್ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.