ನವದೆಹಲಿ: ಪ್ರತಿಪಕ್ಷ ಕಾಂಗ್ರೆಸ್ಗೆ ಪ್ರಧಾನಿ ಮೋದಿ ಭರ್ಜರಿ ಪ್ರಹಾರ ನೀಡಿದ್ದಾರೆ. ಇಂದಿರಾ ಗಾಂಧಿ ಆಡಳಿತ ಅವಧಿಯಲ್ಲಿ ತುರ್ತು ಪರಿಸ್ಥಿತಿಸ್ಥಿತಿ ಜಾರಿಯಾದ ದಿನ ಇನ್ನು ಮುಂದೆ ‘ಸಂವಿಧಾನ ಹತ್ಯೆ ದಿನ’ ಆಗಿ ಆಚರಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಜೂನ್ 25ನ್ನು ಸಂವಿಧಾನ ಹತ್ಯೆ ದಿನ ಎಂದು ಘೋಷಿಸಿದೆ. ಈ ಸಂಬಂಧ ಅಧಿಸೂಚನೆ ಪ್ರಕಟವಾಗಿದೆ.
1975ರ ಜೂನ್ 25ರಂದು ಆಗಿನ ಪ್ರಧಾನಿ ಇಂದಿರಾ ಗಾಂಧಿ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಇಂದಿರಾಗಾಂಧಿ ಅವರು ಸರ್ವಾಧಿಕಾರಿ ಮನಸ್ಥಿತಿ ಪ್ರದರ್ಶಿಸಿ, ತುರ್ತುಪರಿಸ್ಥಿತಿ ಜಾರಿಗೊಳಿಸಿ, ಪ್ರಜಾಪ್ರಭುತ್ವದ ಕತ್ತು ಹಿಸುಕಿದ್ದರು. ಲಕ್ಷಾಂತರ ಅಮಾಯಕರನ್ನು ಜೈಲಿಗೆ ಹಾಕಿದ್ದಲ್ಲದೆ ಮಾಧ್ಯಮಗಳ ಧ್ವನಿಯನ್ನು ಹತ್ತಿಕ್ಕಲಾಗಿತ್ತು. ಆ ಕರಾಳ ದಿನ ಜೂನ್ 25ನ್ನು ಇನ್ನು ಮುಂದೆ ಪ್ರತಿ ವರ್ಷ ಅನ್ನು ‘ಸಂವಿಧಾನ ಹತ್ಯೆ ದಿನ’ ಎಂದು ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಗೃಹ ಸಚಿವ ಅಮಿತ್ ಶಾ,
ಜೂನ್ 25, 1975 ರಂದು, ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರು ಸರ್ವಾಧಿಕಾರಿ ಮನಸ್ಥಿತಿ ಪ್ರದರ್ಶಿಸಿ ರಾಷ್ಟ್ರದ ಮೇಲೆ ತುರ್ತು ಪರಿಸ್ಥಿತಿಯನ್ನು ಹೇರುವ ಮೂಲಕ ನಮ್ಮ ಪ್ರಜಾಪ್ರಭುತ್ವದ ಆತ್ಮವನ್ನು ಕತ್ತು ಹಿಸುಕಿದರು. ತಮ್ಮದಲ್ಲದ ತಪ್ಪಿಗೆ ಲಕ್ಷಗಟ್ಟಲೆ ಜನರನ್ನು ಕಂಬಿಗಳ ಹಿಂದೆ ಎಸೆಯಲಾಯಿತು ಮತ್ತು ಮಾಧ್ಯಮಗಳ ಧ್ವನಿಯನ್ನು ಮೌನಗೊಳಿಸಲಾಯಿತು ಎಂದು ನೆನಪಿಸಿದ್ದಾರೆ.
To observe 25th June as #SamvidhaanHatyaDiwas will serve as a reminder of what happens when the Constitution of India was trampled over. It is also a day to pay homage to each and every person who suffered due to the excesses of the Emergency, a Congress unleashed dark phase of… https://t.co/om14K8BiTz
— Narendra Modi (@narendramodi) July 12, 2024
ಭಾರತ ಸರ್ಕಾರವು ಪ್ರತಿ ವರ್ಷ ಜೂನ್ 25ರಂದು ‘ಸಂವಿಧಾನ ಹತ್ಯಾ ದಿವಸ್’ ಎಂದು ಆಚರಿಸಲು ನಿರ್ಧರಿಸಿದೆ. ಈ ದಿನವು 1975 ರ ತುರ್ತು ಪರಿಸ್ಥಿತಿಯ ಅಮಾನವೀಯ ನೋವುಗಳನ್ನು ಸಹಿಸಿಕೊಂಡ ಎಲ್ಲರ ಕೊಡುಗೆಗಳನ್ನು ಸ್ಮರಿಸುತ್ತದೆ ಎಂದವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರೂ ಟ್ವೀಟ್ ಮಾಡಿ ಕೇಂದ್ರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಜೂನ್ 25ನ್ನು ‘ಸಂವಿಧಾನ್ ಹತ್ಯಾದಿವಸ್’ ಎಂದು ಆಚರಿಸುವುದರಿಂದ ಭಾರತದ ಸಂವಿಧಾನವನ್ನು ತುಳಿದು ಹಾಕಿದಾಗ ಏನಾಗುತ್ತದೆ ಎಂಬುದನ್ನು ನೆನಪಿಸುತ್ತದೆ. ಭಾರತೀಯ ಇತಿಹಾಸದ ಕರಾಳ ಘಟ್ಟವನ್ನು ಕಾಂಗ್ರೆಸ್ ಬಿಚ್ಚಿಟ್ಟ ತುರ್ತುಪರಿಸ್ಥಿತಿಯ ಮಿತಿಮೀರಿದ ಕಾರಣದಿಂದ ನೊಂದ ಪ್ರತಿಯೊಬ್ಬ ವ್ಯಕ್ತಿಗೂ ನಮನ ಸಲ್ಲಿಸುವ ದಿನವೂ ಹೌದು ಎಂದವರು ಪ್ರತಿಪಾದಿಸಿದ್ದಾರೆ.