ಬೆಂಗಳೂರು: ಅಧಿಕಾರ ಕಳೆದುಕೊಂಡಿರುವ ರಾಜ್ಯ ಬಿಜೆಪಿಯಲ್ಲೀಗ ಕೋಲಾಹಲದ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಪಕ್ಷದಿಂದ ಬಂದವರಿಂದಾಗಿ ಬಿಜೆಪಿಯಲ್ಲಿ ಈಗ ಅಶಿಸ್ತು ಮೂಡಿದೆ ಎಂಬ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿದೆ.
ಬಿಜೆಪಿ ಸೋಲಿಗೆ ಆಪರೇಷನ್ ಕಮಲವೇ ಕಾರಣ ಎಂಬ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿಕೆ ಬಗ್ಗೆ ಕಾಂಗ್ರೆಸ್ ನಾಯಕರು ಕಟುವಾಗಿ ಟೀಕಿಸಿದ್ದಾರೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಸಚಿವ ಎಂಬಿ ಪಾಟೀಲ್, ಈ ಬಗ್ಗೆ ಆಪರೇಷನ್ ಕಮಲಾ ಮೂಲಕ ಬಿಜೆಪಿ ಸೇರಿರುವ ನಾಯಕರು ಏನಂತಾರೆ ಎಂದು ಕುಟುಕಿದ್ದಾರೆ. ಆಪರೇಷನ್ ಕಮಲ ಮೂಲಕ ಬಿಜೆಪಿ ಸೇರಿರುವ ಮುನಿರತ್ನ, ಸುಧಾಕರ್, ಎಸ್.ಟಿ.ಸೋಮಶೇಖರ್, ಎಮ್ಟಿಬಿ ನಾಗರಾಜ್, ಬಿ.ಸಿ.ಪಾಟೀಲ್ ಸೇರಿದಂತೆ 17 ಜನರು ಉತ್ತರಿಸಲಿ ಎಂದರು.
ಬಿಜೆಪಿಯೊಳಗಿನ ಬೆಳವಣಿಗೆ ಬಗ್ಗೆ ಬೇಸರಗೊಂಡು ಈ ನಾಯಕರು ಮತ್ತೆ ಕಾಂಗ್ರೆಸ್ ಸೇರ್ಪಡೆಗೆ ಬಯಸಿದರೆ ಅವರನ್ನ ಮರಳಿ ಕಾಂಗ್ರೆಸ್ಗೆ ಸೇರಿಸಿಕೊಳ್ಳುವ ಮಾತೆ ಇಲ್ಲ ಎಂದವರು ಹೇಳಿದರು.