ಬೆಂಗಳೂರು: ಸಾರ್ವಜನಿಕ ಸೇವೆಗಾಗಿ ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ಕುಮಾರ್ ಕಟೀಲ್ ಅವರು ಇಂದು ಅಭಿನಂದಿಸಿದರು.
ಎಸ್.ಎಂ.ಕೃಷ್ಣ ಅವರ ಮನೆಗೆ ತೆರಳಿ ಹಾರಾರ್ಪಣೆ ಮಾಡಿ, ಶಾಲು ಹೊದಿಸಿ ಅವರು ಶುಭ ಹಾರೈಸಿದರು. ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಈ ಸಂದರ್ಭದಲ್ಲಿ ಇದ್ದರು.







































































