ಬೆಂಗಳೂರು: ಕಮೀಷನ್ ಆರೋಪದಲ್ಲಿ ಬೊಮ್ಮಾಯಿ ಸರ್ಕಾರದ ವಿರುದ್ದ ಸಮರ ಸಾರಿರುವ ಪ್ರತಿಪಕ್ಷ ಕಾಂಗ್ರೆಸ್ ಪೇಸಿಎಂ ಅಭಿಯಾನವನ್ನು ಚುರುಕುಗೊಳಿಸಿದೆ. 40% ಕಮೀಷನ್ ಆರೋಪ ಕೇಳಿ ಬಂದರೂ ಸೂಕ್ತ ತನಿಖೆ ನಡೆಸಲು ಮುಂದಾಗದ ಸರ್ಕಾರದ ವಿರುದ್ದ ಈ ರೀತಿಯ ಅಭಿಯಾನವನ್ನು ಕಾಂಗ್ರೆಸ್ ಕೈಗೊಂಡಿದೆ.
ಇದೇ ಸಂದರ್ಭದಲ್ಲಿ ಉನ್ಬತ ಶಿಕ್ಷಣ ಸಚಿವ ಅಶ್ವತ್ಥನಾಯಾರಾಯಣ್ ವಿರುದ್ದವೂ ಅಭಿಯಾನವನ್ನು ಕಾಂಗ್ರೆಸ್ ಆರಂಭಿಸಿದೆ.
‘ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 50 ಲಕ್ಷ ಫಿಕ್ಸ್! ಈ ಕಡೆಯಿಂದ PayCM ಮಾಡಿ, ಆ ಕಡೆಯಿಂದ ಹುದ್ದೆ ಪಡೆಯಿರಿ. ಇದು ಈ ಸರ್ಕಾರದ ಭ್ರಷ್ಟಾಚಾರದ ಮಾದರಿ’ಎಂದು ಟ್ವೀಟ್ ಮಾಡಿರುವ ಕಾಂಗ್ರೆಸ್, ಈ ನೇಮಕಾತಿ ಹಗರಣವನ್ನು ನ್ಯಾಯಾಂಗ ತನಿಖೆ ನಡೆಸಲು ಸರ್ಕಾರ ಹಿಂಜರಿಯುತ್ತಿರುವುದೇಕೆ? ತನಿಖೆಯ ಜಾಡು ವಿಧಾನಸೌಧ ತಲುಪುವ ಭಯವೇ ಎಂದು ಸಿಎಂ ಬೊಮ್ಮಾಯಿ ಅವರನ್ನು ಪ್ರಶ್ನಿಸಿದೆ.
ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ 50 ಲಕ್ಷ ಫಿಕ್ಸ್!
ಈ ಕಡೆಯಿಂದ #PayCM ಮಾಡಿ, ಆ ಕಡೆಯಿಂದ ಹುದ್ದೆ ಪಡೆಯಿರಿ.
ಇದು ಈ ಸರ್ಕಾರದ ಭ್ರಷ್ಟಾಚಾರದ ಮಾದರಿ.ಈ ನೇಮಕಾತಿ ಹಗರಣವನ್ನು ನ್ಯಾಯಾಂಗ ತನಿಖೆ ನಡೆಸಲು ಹಿಂಜರಿಯುತ್ತಿರುವುದೇಕೆ #40PercentSarkara ?
ತನಿಖೆಯ ಜಾಡು ವಿಧಾನಸೌಧ ತಲುಪುವ ಭಯವೇ @BSbommai ಅವರೇ? pic.twitter.com/HoOYuDpV7Z
— Karnataka Congress (@INCKarnataka) September 23, 2022