ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿ ಅವರನ್ನು ಬಂಧಿಸಿರುವ ಬೆಳಗಾವಿ ಪೊಲೀಸರು ತಾರತಮ್ಯ ನೀತಿ ಅನುಸರಿಸಿದರೆ? ಪೊಲೀಸರ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ದವೂ ಕಿಡಿ ಕಾರಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರಿನ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಸಿ.ಟಿ.ರವಿ ಅವರನ್ನು ಬಂಧಿಸಿರುವ ಪೊಲೀಸರು ತಡ ರಾತ್ರಿವರೆಗೂ ಬೆಳಗಾವಿ ಜಿಲ್ಲೆ ಖಾನಾಪುರ ಠಾಣೆಯಲ್ಲೇ ಕೂರಿಸಿದ್ದಾರೆ. ಬೆಂಗಳೂರು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲು ಪೊಲೀಸರ ತಯಾರಿ ನಡೆಸಿದ್ದಾರೆ ಎನ್ನಲಾಗಿದೆ.
ಪೊಲೀಸರ ಕಾರ್ಯ ವೈಖರಿ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸಿ.ಟಿ.ರವಿ ಆಕ್ಷೇಪ, ನನ್ನ ವಿರುದ್ದದ ದೂರಿನಲ್ಲಿ ಆಸಕ್ತಿ ತೋರಿರುವ ಪೊಲೀಸರು, ನಾನು ನೀಡಿರುವ ದೂರಿನ ಬಗ್ಗೆ ತಡರಾತ್ರಿವರೆಗೂ ಕ್ರಮ ಕೈಗೊಂಡಿಲ್ಲವೇಕೆ? ಎಂದು ಪ್ರಶ್ನಿಸಿದ್ದಾರೆ.
ತಮ್ಮ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಈ ಬಗ್ಗೆ ನಾನು ಪೊಲೀಸರಿಗೆ ದೂರು ನೀಡಿದ್ದೇನೆ. ನಾನು ಕೊಟ್ಟಿರುವ ದೂರಿನ FIR ಪ್ರತಿಯನ್ನು ನೀಡಲು ಪೊಲೀಸರು ಮೀನಾಮೇಷ ಎಣಿಸುತ್ತಿರುವುದಾದರೂ ಏಕೆ ಎಂದು ಸಿ.ಟಿ.ರವಿ ಪ್ರಶ್ನಿಸಿದ್ದಾರೆ.
‘ನನ್ನ ಮೇಲೆ ನಡೆದಿರುವ ಹಲ್ಲೆ ಘಟನೆ ಬಗ್ಗೆ ದೂರು ನೀಡಿದ್ದೇನೆ’. ನಾನು ದೂರು ದಾಖಲಿಸಿರುವ ಬಗ್ಗೆ FIR ಪ್ರತಿ ನೀಡಿ’ ಎಂದು ಪಟ್ಟು ಹಿಡಿದಿರುವ ಸಿ.ಟಿ.ರವಿ,
ತಮ್ಮ ವಿರುದ್ದದ ಪ್ರಕರಣದಲ್ಲಿ ಪೊಲೀಸರಿಂದ ತಾರತಮ್ಯ ನಡೆದಿದೆ ಎಂದು ಆರೋಪಿಸಿದ್ದಾರೆ.