ಬೆಂಗಳೂರು: ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಅಶ್ಲೀಲ ವೀಡಿಯೋ ಪ್ರಕರಣ ತನಿಖೆಗಾಗಿ ಎಡಿಜಿಪಿ ಬಿ.ಕೆ.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಾಜ್ಯ ಸರ್ಕಾರ ರಚಿಸಿದೆ. ಈ ಎಸ್ಐಟಿಯಲ್ಲಿ ಮೂವರು ಎಸ್.ಪಿ., ನಾಲ್ವರು ಡಿವೈಎಸ್ಪಿಗಳು ಇದ್ದಾರೆ. ಇವರಲ್ಲಿ ಓರ್ವ ಮಹಿಳಾ ಎಸ್ಪಿ ಇರಲಿದ್ದಾರೆ.
ಈ ಕುರಿತಂತೆ ಮಾಹಿತಿ ಒದಗಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು SIT ತಂಡ ರಚಿಸಲಾಗಿದೆ. ಅದರ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿರುವ ಬಗ್ಗೆ ಮಾಹಿತಿ ಇದ್ದು ಅವರಿಗೆ ನೊಟೀಸ್ ನೀಡಿ ಕರೆಸಿ ತನಿಖೆ ಮಾಡುವ ಬಗ್ಗೆ ತನಿಖಾಧಿಕಾರಿಗಳೇ ತೀರ್ಮಾಣಿಸುತ್ತಾರೆ ಎಂದವರು ಹೇಳಿದ್ದಾರೆ.


























































