ಬೆಂಗಳೂರು: ವಂಚನೆ ಪ್ರಕರಣದಲ್ಲಿ ಸಚಿವ ಶ್ರೀರಾಮುಲು ಆಪ್ತ ಸಹಾಯಕನ ಬಂಧನ ವಿಚಾರವನ್ನು ಮುಂದಿಟ್ಟು ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ದ ಟೀಕಾಸ್ತ್ರ ಪ್ರಯೋಗಿಸಿದ್ದಾರೆ.
ಲಂಚ ಪಡೆದ ಸಿಬ್ಬಂದಿಯನ್ನು ಬಂಧಿಸಿದರಷ್ಟೇ ಸಾಲದು, ಆತ ಯಾರ ಪರವಾಗಿ ಲಂಚ ಪಡೆದಿದ್ದಾನೆ ಮತ್ತು ಪಡೆದಿರುವ ಲಂಚವನ್ನು ಯಾರಿಗೆ ಕೊಟ್ಟಿದ್ದಾನೆ ಎಂಬ ಬಗ್ಗೆಯೂ ತನಿಖೆಯಾಗಬೇಕು ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತಂತೆ ಅವರು ಮಾಡಿರುವ ಟ್ವೀಟ್ ಗಮನಸೆಳೆದಿದೆ.
ಲಂಚ ಪಡೆದ ಸಿಬ್ಬಂದಿಯನ್ನು ಬಂಧಿಸಿದರಷ್ಟೇ ಸಾಲದು, ಆತ ಯಾರ ಪರವಾಗಿ ಲಂಚ ಪಡೆದಿದ್ದಾನೆ ಮತ್ತು ಪಡೆದಿರುವ ಲಂಚವನ್ನು ಯಾರಿಗೆ ಕೊಟ್ಟಿದ್ದಾನೆ ಎಂಬ ಬಗ್ಗೆಯೂ ತನಿಖೆಯಾಗಬೇಕು. 1/2#ಭ್ರಷ್ಟ_ಬಿಜೆಪಿ
— Siddaramaiah (@siddaramaiah) July 2, 2021
ಈ ಲಂಚ ಹಗರಣದಲ್ಲಿ ಸಚಿವ ಶ್ರೀರಾಮುಲು ಮತ್ತು ಮುಖ್ಯಮಂತ್ರಿಗಳ ಮಗನ ಹೆಸರೂ ತಳುಕು ಹಾಕಿಕೊಂಡಿರುವುದರಿಂದ ಅವರಿಬ್ಬರ ಪಾತ್ರದ ಬಗ್ಗೆಯೂ ತನಿಖೆ ನಡೆದರೆ ಅಸಲಿ ಸತ್ಯ ಹೊರಬರಬಹುದು ಎಂದವರು ಹೇಳಿದ್ದಾರೆ.
ಈ ಲಂಚ ಹಗರಣದಲ್ಲಿ ಸಚಿವ @sriramulubjp ಮತ್ತು ಮುಖ್ಯಮಂತ್ರಿಗಳ ಮಗ @BYVijayendra ಹೆಸರೂ ತಳುಕು ಹಾಕಿಕೊಂಡಿರುವುದರಿಂದ ಅವರಿಬ್ಬರ ಪಾತ್ರದ ಬಗ್ಗೆಯೂ ತನಿಖೆ ನಡೆದರೆ ಅಸಲಿ ಸತ್ಯ ಹೊರಬರಬಹುದು. 2/2#ಭ್ರಷ್ಟ_ಬಿಜೆಪಿ
— Siddaramaiah (@siddaramaiah) July 2, 2021