ಬೆಂಗಳೂರು: ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಸಚಿವ ಶ್ರೀರಾಮುಲು ಆಪ್ತನ ಬಂಧನ ಕುರಿತಂತೆ ಟ್ವೀಟ್ ಮಾಡಿರುವ ಅವರು ಟೀಕೆಗಳಿಗೆ ತಮ್ನದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ಸಾರ್ವಜನಿಕ ಕ್ಷೇತ್ರದಲ್ಲಿರುವಾಗ ನೆರವು ಕೇಳುವವರನ್ನು ಅನುಮಾನಿಸಿ ನೋಡಲಾಗದು. ಹಾಗೆಂದು ಎಚ್ಚರ ತಪ್ಪಲಾಗದು. ಹೆಸರು ದುರುಪಯೋಗಪಡಿಸಿಕೊಂಡು ಕಳಂಕ ಹಚ್ಚುವ ವಂಚಕರಿಂದ ತೊಂದರೆ ತುಸು ಹೆಚ್ಚಾಗಿಯೇ ಬಾಧಿಸುತ್ತಿದೆ. ಇದು ವಿರೋಧಿಗಳಿಗೆ ಅಪಪ್ರಚಾರದ ಸರಕಾಗಿಯೂ ಬಳಕೆಯಾಗುತ್ತಿದೆ. (1/2) pic.twitter.com/3gY031Wr7W
— Vijayendra Yediyurappa (Modi Ka Parivar) (@BYVijayendra) July 2, 2021
ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ. ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿಜಯೇಂದ್ರ ಸಲಹೆ ನೀಡಿದ್ದಾರೆ.
ಸಾರ್ವಜನಿಕರು ಮೋಸ ಹೋಗಬಾರದೆಂಬ ಹಿತದೃಷ್ಟಿಯಿಂದ ಹಾಗೂ ನನ್ನ ವ್ಯಕ್ತಿತ್ವ ರಕ್ಷಣೆಗಾಗಿ, ಅನಿವಾರ್ಯವಾಗಿ ನೀಡಿದ ದೂರಿನ ಮೇಲೆ ಪೋಲಿಸರು ಕ್ರಮ ತೆಗೆದುಕೊಂಡಿದ್ದಾರೆ.
ನನ್ನನೂ ಸೇರಿದಂತೆ ಸಾರ್ವಜನಿಕ ಕ್ಷೇತ್ರದಲ್ಲಿರುವ ಮುಖಂಡರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವ, ವಂಚಿಸುವವರ ಬಗ್ಗೆ ಸಮಾಜ ಎಚ್ಚರದಿಂದರಬೇಕೆಂದು ವಿನಂತಿಸುವೆ. 🙏 (2/2)
— Vijayendra Yediyurappa (Modi Ka Parivar) (@BYVijayendra) July 2, 2021