ಶಿವಮೊಗ್ಗ: ಗೃಹ ಸಚಿವ ಅರಗ ಜ್ಞಾನೇಂದ್ರರ ತವರು ಇದೀಗ ಅಚ್ಚರಿಯ ಸನ್ನಿವೇಶಗಳಿಗೆ ಸಾಕ್ಷಿಯಾಗುತ್ತಿವೆ. ಜಾತ್ರಾ ಮಹೋತ್ಸವಗಳಲ್ಲಿ ಸ್ಥಳೀಯ ಜನನಾಯಕ ಅರಗ ಜ್ಞಾನೇಂದ್ರರ ಹೆಸರಲ್ಲಿ ದೇವರಿಗೆ ಫಲ-ಪುಷ್ಪ ಸಮರ್ಪಣೆಯ ಕೈಂಕರ್ಯವು ವಿಶೇಷ ಎಂಬಂತೆ ಕಂಡುಬರುತ್ತಿದೆ.
ಶಿವಮೊಗ್ಗ ಜಿಲ್ಲೆಯ ಜಾತ್ರಾ ಮಹೋತ್ಸವ ವೇಳೆ ಹಣ್ಣುಗಳ ಮೇಲೆ ಅರಗ ಜ್ಞಾನೇಂದ್ರರ ಹೆಸರನ್ನು ಬರೆದು ದೇವರಿಗೆ ಸಮರ್ಪಿಸುವ ಬೆಂಬಲಿಗರ ನಡೆ ಅಚ್ಚರಿಗೆ ಕಾರಣವಾಗಿದೆ.
ಇನ್ನೊಂದೆಡೆ, ಮೇಳಿಗೆಯ ಶ್ರೀ ಲಕ್ಷ್ಮೀ ವೆಂಕಟರಮಣ ಸ್ವಾಮಿ ದೇವಸ್ಥಾನದ ರಥೋತ್ಸವದಲ್ಲೂ ಅಂಥದ್ದೇ ಪ್ರಸಂಗ ಕಂಡುಬಂತು. ಸಚಿವ ಆರಗ ಜ್ಞಾನೇಂದ್ರರ ಹೆಸರನ್ನು ಬಾಳೆಹಣ್ಣಿನಲ್ಲಿ ಬರೆದು, ಅದನ್ನು ರಥಕ್ಕೆ ಸಮರ್ಪಿಸುವ ಮೂಲಕ ಸಚಿವ ಬೆಂಬಲಿಗರೊಬ್ಬ ಕುತೂಹಲದ ಕೇಂದ್ರಬಿಂದುವಾದರು.