ನವದೆಹಲಿ: ಪಹಲ್ಲಾಮ್ ಉಗ್ರರ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಉಗ್ರ ಪೋಷಕ ಪಾಕಿಸ್ತಾನದ ಮೇಲೆ ಭಾರತ ವಾಯುದಾಳಿ ನಡೆಸಿದ್ದು, ಉಗ್ರರ ಅಡಗುತಾಣಗಳನ್ನು ಧ್ವಂಸ ಮಾಡಿದೆ.
Pakistan pic.twitter.com/XuGFEMYjat
— Mossad Commentary (@MOSSADil) May 6, 2025
ಬುಧವಾರ ತಡ ರಾತ್ರಿ ಪಾಕ್ ಆಕ್ರಮಿತ ಭಾರತ ಪ್ರದೇಶದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಯಲ್ಲಿ 35ಕ್ಕೂ ಹೆಚ್ಚು ಮಂದಿ ಉಗ್ರರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ್ ‘ ಎಂದು ಹೆಸರಿಸಲಾಗಿದೆ.
ಈ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ್ ‘ ಎಂದು ಹೆಸರಿಸಲು ಒಂದು ಕಾರಣವೂ ಇದೆ. ಪಹಲ್ಲಾಮ್ ದಾಳಿ ಸಂದರ್ಭದಲ್ಲಿ ಹಿಂದೂಗಳನ್ನೂ ಹುಡುಕಾಡಿ ಉಗ್ರರು ನರಮೇಧ ನಡೆಸಿದ್ದಾರೆ. ಕೇವಲ ಪುರುಷರನ್ನೇ ಗುಂಡಿಟ್ಟು ಕೊಂಡು ಮಹಿಳೆಯರ ಕುಂಕುಮ ಅಳಿಸಿದ್ದಾರೆ. ಈ ಕಾರಣದಿಂದಲೇ ಪಾಕ್ ಉಗ್ರರನ್ನು ಅಳಿಸಿಹಾಕುವ ಕಾರ್ಯಾಚರಣೆಯನ್ನು ಮೋದಿ ಸರ್ಕಾರ ಆರಂಭಿಸಿದೆ.
🚨 MASSIVE NEWS
🇮🇳🇵🇰 India launches MISSILE ATTACK on Pakistan.
Pakistan Army confirms attack by India.
Missiles fired at Kotli, Muzaffarabad, and Bahawalpur pic.twitter.com/JzN32a1EyF
— Megh Updates 🚨™ (@MeghUpdates) May 6, 2025
ವರ್ಷಗಳ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದ ಭಾರತ ಈ ಬಾರಿ ಅದಕ್ಕಿಂತಲೂ ಭೀಕರ ಕಾರ್ಯಾಚರಣೆ ನಡೆಸಿದೆ. ಕೋಟ್ಲಿ, ಬಹ್ವಲ್ಪುರ್ ಮತ್ತು ಮುಜಫರಾಬಾದ್ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಈ ಕಾರ್ಯಾಚರಣೆಗೆ ‘ಆಪರೇಷನ್ ಸಿಂಧೂರ್’ ಎಂದು ಹೆಸರಿಸಲಾಗಿದ್ದಕ್ಕೆ ದೇಶವ್ಯಾಪಿ ಸ್ವಾಗತ ವ್ಯಕ್ತವಾಗಿದೆ.