ಧಾರವಾಡ: ತೀವ್ರ ಕುತೂಹಲ ಕೆರಳಿಸಿರುವ ಧಾರವಾಡ ಲೋಕಸಭಾ ಕ್ಷೇತ್ರ ಅಚ್ಚರಿಯ ಬೆಳವಣಿಗೆಗೆ ಸಾಕ್ಷಿಯಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ದಿಂಗಾಲೇಶ್ವರ ಶ್ರೀ ಇದೀಗ ಅಖಾಡದಿಂದ ಹಿಂದೆ ಸರಿದಿದ್ದಾರೆ.
ಕೇಂದ್ರ ಸಚಿವ ಪ್ತಲ್ಹಾದ್ ಜೋಷಿ ವಿರುದ್ದ ಸಮರ ಸಾರಿದ್ದ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರು ನಾಮಪತ್ರ ಸಲ್ಲಿಸಿದ್ದರು. ಯಾರೇ ಒತ್ತಡ ಹೇತರಿದರೂ ನಾಮಪತ್ರ ವಾಪಸ್ ಪಡೆತಲ್ಲ ಎಂದಿದ್ದ ಶ್ರೀಗಳು ಇದೀಗ ಯೂಟರ್ನ್ ಹೊಡೆದಿದ್ದಾರೆ.
ಉಮೇದುವಾರಿಕೆ ವಾಪಸ್ ಪಡೆಯಲು ಕೊನೆಯ ದಿನವಾದ ಇಂದು (ಸೋಮವಾರ) ಶ್ರೀಗಳು ನಾಮಪತ್ರ ಹಿಂಪಡೆದು ಅಚ್ಚರಿಗೆ ಕಾರಣರಾದರು. ದಿಂಗಾಲೇಶ್ವರ ಶ್ರೀಗಳ ನಿರ್ಧಾರದಿಂದಾಗಿ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿಗೆ ರಿಲೀಫ್ ಸಿಕ್ಕಂತಾಗಿದೆ.