ಉಡುಪಿ : ಕೊರೋನಾ ಸಂಕಟಕಾಲದಲ್ಲಿ ದೇವಾಲಯಗಳಲ್ಲಿ ದೇವರ ದರ್ಶನ ಮಾಡಲು ಭಕ್ತರಿಗೆ ಅವಕಾಶವಿರಲಿಲ್ಲ. ನಿಯಮ ಸಡಿಲಿಕೆ ನಂತರವಷ್ಟೇ ದೇವಾಲಯಗಳಲ್ಲಿ ಪೂಜೆ ಪುನಸ್ಕಾರಗಳಿಗೆ ಅವಕಾಶವಿದೆ.
ಈ ನಡುವೆ, ಕರಾವಳಿಯಲ್ಲಿರುವ ಪುರಾಣಪ್ರಸಿದ್ದ ದೇವಾಲಯ ಕೊಲ್ಲೂರು ಮೂಕಾಂಬಿಕ ಕ್ಷೇತ್ರದಲ್ಲಿ ಮತ್ತಷ್ಟು ಟಫ್ ರೂಲ್ ಜಾರಿಗೆ ಬಂದಿದೆ.
ಕರಾವಳಿಯಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿಯಮ ಜಾರಿಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.