ಬೆಂಗಳೂರು: ಹನುಮನ ಸುಡಲು ಹೋಗಿ ಲಂಕೆಗೆ ಬೆಂಕಿ ಹಚ್ಚಿಸಿಕೊಂಡ ರಾವಣನ ಸ್ಥಿತಿಗೆ ಸಿದ್ದು ಸರ್ಕಾರ ತಲುಪಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ.
“ನಿಮ್ಮ ಹಿಂದೂ ದ್ವೇಷದ ಬೆಟ್ಟ ನಿಮಗೆಷ್ಟು ಬೇಕೋ ಅಗೆಯಿರಿ, ಇನ್ನಷ್ಟು ಆಳಕ್ಕೂ ಇಳಿದು ಬಗೆಯಿರಿ, ನಿಮಗೇನೂ ದಕ್ಕದು, ಹಿಂದೂ ಕಾರ್ಯಕರ್ತರ ಒಂದೇ ಒಂದು ರೋಮವನ್ನೂ ಕೊಂಕಿಸಲೂ ಸಾಧ್ಯವಾಗದು” ಎಂದು ವಿಜಯೇಂದ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಮ ಜನ್ಮಭೂಮಿ ಹೋರಾಟದ 31 ವರ್ಷ ಹಳೆಯ ಪ್ರಕರಣಗಳನ್ನು ಕೆದಕಿ ಕರ ಸೇವಕರನ್ನು ಬಂಧಿಸಿದ್ದರ ಬೆನ್ನಲ್ಲೇ, ಇದೀಗ 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರು ತನಿಖೆ ಮಾಡಿಸಿ ಕಾಂಗ್ರೆಸ್ ಸರ್ಕಾರ ದತ್ತಾತ್ರೇಯನ ಭಕ್ತರ ವಿರುದ್ಧವೂ ಷಡ್ಯಂತ್ರ ರೂಪಿಸಲು ಹೊರಟಿದೆ ಎಂದಿರುವ ವಿಜಯೇಂದ್ರ, ‘ಹನುಮನ ಸುಡಲು ಹೋಗಿ ಲಂಕೆಗೆ ಬೆಂಕಿ ಹಚ್ಚಿಸಿಕೊಂಡ ರಾವಣನ ಸ್ಥಿತಿಗೆ ನಿಮ್ಮ ಸರ್ಕಾರ ತಲುಪುತ್ತಿದೆ’ ಎಂದು ಬರೆದಿರುವ ಸಾಲುಗಳು ಗಮನಸೆಳೆದಿವೆ.
ಕಾಂಗ್ರೆಸ್ ಮೇಧಾವಿಗಳೇ,
ಮೊನ್ನೆ ಕರಸೇವಕರು, ಇಂದು ದತ್ತ ಪೀಠದ ಹೋರಾಟಗಾರರನ್ನು ಬೆನ್ನು ಹತ್ತಲು ಪೋಲಿಸರಿಗೆ ಸೂಚಿಸಿದ್ದೀರಿ. ನಿವೆಷ್ಟೇ ಭಯ ಹುಟ್ಟಿಸಿದರೂ ರಾಮ ಭಕ್ತರ ಅಯೋಧ್ಯೆ ಭೇಟಿಯ ಸಂಖ್ಯೆ ಕ್ಷೀಣಿಸಲು ಸಾಧ್ಯವಾಗದು, ಬದಲಾಗಿ ಅದು ವಿಸ್ತಾರಗೊಳ್ಳತ್ತಲೇ ಇರುತ್ತದೆ.
“ನಿಮ್ಮ ಹಿಂದೂ ದ್ವೇಷದ ಬೆಟ್ಟ ನಿಮಗೆಷ್ಟು ಬೇಕೋ ಅಗೆಯಿರಿ,…
— Vijayendra Yediyurappa (Modi Ka Parivar) (@BYVijayendra) January 4, 2024