ಬೆಂಗಳೂರು: ಸಾರಿಗೆ ವಾಹನಗಳ ಮಾಲೀಕರ ಸಂಕಷ್ಟಕ್ಕೆ ಸ್ಪಂಧಿಸಿರುವ ಸರ್ಕಾರ ಮೇ ತಿಂಗಳ ತೆರಿಗೆ ವಿನಾಯಿತಿ ಪ್ರಕಟಿಸಿದೆ.
ಸದ್ಯ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಲ್ಲಿದ್ದು, ವಾಹನ ಸಂಚಾರಕ್ಕೆ ನಿಷೇಧ ಇರುವುದರಿಂದ ಕರ್ನಾಟಕ ಸರ್ಕಾರ ವಾಹನ ಸವಾರರಿಗೆ ಈ ವಿನಾಯಿತಿ ನೀಡಿದೆ.
ರಾಜ್ಯದಲ್ಲಿ ನೋಂದಾಯಿಸಿರುವ ಎಲ್ಲಾ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಈ ಆದೇಶದಿಂದ ಅನುಕೂಲವಾಗಲಿದ. 2021ರ ಮೇ ತಿಂಗಳ ಅವಧಿಗೆ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ. ಹೊಸ ವಾಹನಗಳ ನೊಂದಣಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೊರೋನಾ ಸೋಂಕಿಗೆ ಕಡಿವಾಣ ಹಾಕುವ ಸಂಬಂಧ ರಾಜ್ಯದಲ್ಲಿ ಲಾಕ್ಡೌನ್ಕಠಿಣ ನಿಯಮ ಜಾರಿ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಹೀಗಾಗಿ ಖಾಸಗಿ ವಾಹನಗಳ ಸಂಚಾರಕ್ಕೂ ಸರ್ಕಾರ ನಿರ್ಬಂಧ ಹೇರಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೇ ತಿಂಗಳ ಮೋಟಾರು ವಾಹನ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಿದೆ