ಬೆಂಗಳೂರು: ಪಾಸಿಟಿವ್ ದರದ ಆಧಾರದ ಮೇಲೆ, ಸಂಪುಟದಲ್ಲಿ ಚರ್ಚಿಸಿ ಹಲವು ಜಿಲ್ಲೆಗಳಲ್ಲಿ ಅನ್ಲಾಕ್ಗೆ ಸರ್ಕಾರ ತೀರ್ಮಾನ ಕೈಗೊಂಡಿದೆ. ಮಂಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ಲಾಕ್ಡೌನ್ ನಿಯಮ ಮುಂದುವರಿಕೆ ಇದೆ. ಈ ಜಿಲ್ಲೆಗಳಲ್ಲಿ ಭಾಗಶಃ ಅನ್ಲಾಕ್ ಮಾಡಲಾಗಿದೆ.
ಉತ್ತರಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಕೋಲಾರ, ಬೆಂಗಳೂರು, ಗದಗ್, ರಾಯಚೂರು, ಬಾಗಲಕೋಟೆ, ಕಲಬುರಗಿ, ರಾಮನಗರ, ಚಿಕ್ಕಬಳ್ಳಾಪುರ, ಹಾವೇರಿ, ಯಾದಗಿರಿ, ಬೀದರ್ ಸಹಿತ ಸೋಂಕಿನ ಪ್ರಮಾಣ ಶೇಕಡಾ 5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ 17 ಜಿಲ್ಲೆಗಳಲ್ಲಿ ಲಾಕ್ಡೌನ್ ನಿಯಮ ಮತ್ತಷ್ಟು ಸಡಿಲಿಕೆ ಮಾಡಲಾಗಿದೆ.
ಸಚಿವರ ಸಭೆಯ ನಂತರ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಅನ್ಲಾಕ್ ನಿಯಮಗಳ ಬಗ್ಗೆ ಮಾಹಿತಿ ನೀಡಿದರು.
16 ಜಿಲ್ಲೆಗಳಲ್ಲಿ ಏನಿರುತ್ತೆ..? ಏನಿರಲ್ಲ..? ಇಲ್ಲಿದೆ ಮಾಹಿತಿ:
- ಲಾಕ್ಡೌನ್ ಸಡಿಲಕೆಯಾಗಿರುವ ಜಿಲ್ಲೆಗಳಲ್ಲಿ ಎಲ್ಲಾ ಅಂಗಡಿಗಳನ್ನು ಸಂಜೆ 5 ಗಂಟೆ ವರೆಗೆ ತೆರೆಯಬಹುದು.
- ಸಂಜೆ 7 ಗಂಟೆ ನಂತರ ಎಲ್ಲವೂ ಬಂದ್.
- ಎಸಿ ಇಲ್ಲದ ಹೊಟೇಲ್, ಬಾರ್ಗಳಲ್ಲಿ ಕುಳಿತು ತಿನ್ನಲು ಅನುಮತಿ.
- ಹೊಟೇಲ್, ಬಾರ್, ರೆಸ್ಟೋರೆಂಟ್ಗಳಲ್ಲಿ ಶೇ.50ರಷ್ಟು ಮಂದಿಯಷ್ಟೇ ಕುಳಿತು ಊಟ ಮಾಡಬಹುದು.
- ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ.
- ಹೊರಾಂಗಣ ಕ್ರೀಡೆಗಳಿಗೆ
- ಜಿಮ್ ಸೆಂಟರ್ ತೆರೆಯಲು ಅವಕಾಶ.
- ಆಭರಣ ಮಳಿಗೆ, ಬಟ್ಟೆ ಅಂಗಡಿ, ಮೊಬೈಲ್ ಅಂಗಡಿ ಸಹಿತ ವಣಿಜ್ಯ ಮಳಿಗೆಗಳಿಗೆ ಅವಕಾಶ.
- ಲಾಡ್ಜ್ಗಳೂ ರೆಸಾರ್ಟ್ಗಳೂ ಓಪನ್.
- ಬಸ್ ಸಹಿತ ಸಮೂಹ ಸಾರಿಗೆ ವ್ಯವಸ್ಥೆ ಪುನರಾರಂಭ. ಆದರೆ 50% ಪ್ರಯಾಣಿಕರಿಗಷ್ಟೇ ಅವಕಾಶ.
- ಸಿನಿಮಾ ಮಂದಿರ ಹಾಗೂ ದೇವಾಲಯ, ಪ್ರಾರ್ಥನಾ ಮಂದಿರಗಳಿಗೆ ನಿರ್ಬಂಧ ಮುಂದುವರಿಕೆ.
- ಸಭೆ ಸಮಾರಂಭ, ರಾಜಕೀಯ ಕಾರ್ಯಕ್ರಮಗಳಿಗೆ ನಿರ್ಬಂಧ ಮುಂದುವರಿಕೆ.
- ಶಾಲಾ, ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ ನಿರ್ಬಂಧ.
- ಪಬ್, ಕ್ಲಬ್ಗಳಿಗೆ ಅವಕಾಶ ಇಲ್ಲ.
- ಈಜುಕೊಳ, ಅಮ್ಯೂಸ್ಮೆಂಟ್ ಪಾರ್ಕ್ ತೆರೆಯಲು ಅವಕಾಶ ಇಲ್ಲ.
ಆದರೆ, ಶೇಕಡಾ 5ಕ್ಕಿಂತ ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಚಾಮರಾಜನಗರ, ಉಡುಪಿ, ದಕ್ಷಿಣಕನ್ನಡ, ಕೊಡಗು, ಕಾರವಾರ, ಶಿವಮೊಗ್ಗ, ಧಾರವಾಡ, ಬಳ್ಳಾರಿ, ಹಾಸನ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾಗಶಃ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ಡೌನ್ ನಿಯಮ ಜಾರಿಯಲ್ಲಿರುತ್ತದೆ ಎಂದವರು ತಿಳಿಸಿದ್ದಾರೆ.
ಇದೇ ವೇಳೆ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿ ದಿನ ನೈಟ್ ಕರ್ಫ್ಯೂ ಹಾಗೂ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ.