ಬೆಂಗಳೂರು: ಕೊರೋನಾ ಲಾಕ್ಡೌನ್ ಸಂದರ್ಭದಲ್ಲಿ ಸಿನಿಮಾಮಂದಿ ಸಂಕಷ್ಟದಲ್ಲಿದ್ದು ಅವರ ನೆರವಿಗೆ ಧಾವಿಸಿ ಮೆಚ್ಚುಗೆಗೆ ಪಾತ್ರರಾಗಿರುವ ರಿಯಲ್ ಸ್ಟಾರ್ ಉಪೇಂದ್ರ ಇದೀಗ ಅನ್ನದಾತರಿಗೆ ನೆರವಾಗಿ ಎಲ್ಲರ ಗಮನಸೆಳೆದಿದ್ದಾರೆ.
ರೈತರು ಬೆಳೆದ ತರಕಾರಿಗಳನ್ನು ಖರೀದಿಸಿ ಅದನ್ನು ಸಂಕಷ್ಟದಲ್ಲಿರುವ ಜನರಿಗೆ ಉಪೇಂದ್ರ ಅವರು ಉಚಿತವಾಗಿ ಹಂಚುತ್ತಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಉಪೇಂದ್ರ, ರೈತರು ಬೆಳೆದ ಬೆಳೆ ವ್ಯಾಪಾರವಾಗದೇ ನಾಶವಾಗುವ ಬೆಳೆಯನ್ನು ನಾವು ಕೊಂಡು ಅದನ್ನು ಸಂಕಷ್ಟದಲ್ಲಿರುವ ಜನರಿಗೆ ಉಚಿತವಾಗಿ ಹಂಚುತ್ತಿದ್ದೇವೆ. ಇದು ವ್ಯಾಪಾರ ಎಂದು ದಯವಿಟ್ಟು ತಿಳಿಯಬೇಡಿ ಎಂದಿದ್ದಾರೆ. ಅಷ್ಠೇ ಅಲ್ಲ ಸಂಕಷ್ಟದಲ್ಲಿರುವ ರೈತರು ಮಾತ್ರ ತಮ್ಮನ್ನು ಸಂಪರ್ಕಿಸಿ ಎಂದು ತಮ್ಮ ಮೊಬೈಲ್ ನಂಬರನ್ನು ಶೇರ್ ಮಾಡಿದ್ದಾರೆ.
ರೈತರ ಗಮನಕ್ಕೆ…..
ನಿಮ್ಮೆಲ್ಲರ ಅದ್ಭುತ ಪ್ರತಿಕ್ರಿಯೆಗೆ ಧನ್ಯವಾದಗಳು
ಬೆಳೆದ ಬೆಳೆ ವ್ಯಾಪಾರವಾಗದೇ ನಾಶವಾಗುವ ಬೆಳೆಯನ್ನು ನಾವು ಕೊಂಡು ಅದನ್ನು ಸಂಕಷ್ಟದಲ್ಲಿರುವ ಜನರಿಗೆ ಉಚಿತವಾಗಿ ಹಂಚುತ್ತಿದ್ದೇವೆ.
ಇದು ವ್ಯಾಪಾರ ಎಂದು ದಯವಿಟ್ಟು ತಿಳಿಯಬೇಡಿ.
ಅಂತಹ ಸಂಕಷ್ಟದಲ್ಲಿರುವ ರೈತರು ಮಾತ್ರ ಈ ಮೊಬೈಲ್ ಗೆ ಸಂಪರ್ಕಿಸಿ.+91 98457 63396
— Upendra (@nimmaupendra) May 16, 2021
ತಾವು ರೈತರಿಂದ ಖರೀದಿಸಿದ ತರಕಾರಿಗಳನ್ನು ಸಂಕಷ್ಟದಲ್ಲಿರುವವರಿಗೆ ಹಂಚುವ ಫೊಟೋಗಳನ್ನೂ ಅವರು ಪೋಸ್ಟ್ ಮಾಡಿದ್ದಾರೆ.
ರೈತರಿಂದ ನೇರವಾಗಿ ಕೊಂಡ ಟೊಮೇಟೋ ಇಂದು ವಿತರಣೆ 🙏 pic.twitter.com/zx5c0SJrCe
— Upendra (@nimmaupendra) May 16, 2021