ವಾರಣಾಸಿ: ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಣಕಹಳೆ ಮೊಳಗಿಸಿ ವಾರಣಾಸಿ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದ ಕಾಮಿಡಿಯನ್ ಶ್ಯಾಮ್ ರಂಗೀಲಾ ಅವರಿಗೆ ಹಿನ್ನಡೆಯಾಗಿದೆ. ಅವರು ಸಲ್ಲಿಸಿದ್ದ ಅವರ ನಾಮಪತ್ರವನ್ನು ತಿರಸ್ಕೃತವಾಗಿದ್ದು ವಾರಣಾಸಿ ಕ್ಷೇತ್ರ ಅಚ್ಚರಿಯ ಬೆಳವಣಿಗೆಗೆ ಸಾಕ್ಷಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿಯವರ ಧ್ವನಿಯನ್ನು ಅನುಕರಿಸುವ ಮೂಲಕ ಕಾಮಿಡಿಯನ್ ಶ್ಯಾಮ್ ರಂಗೀಲಾ ಎಲ್ಲರ ಕುತೂಹಲದ ಕೇಂದ್ರಬಿಂದುವಾಗಿದ್ದರು. ಮೋದಿ ಧ್ವನಿಯನ್ನು ಅನುಕರಿಸಿದ ಶ್ಯಾಮ್ ಚಾಲಾಕಿತನ ಹೀಗಿದೆ.
हम जो कहते है कर के भी दिखाते है…
देश का तेल- देश के हित में..‘मन की बात’ अन्दाज़ में ये नया विडीओ #PetrolDieselPriceHike #DieselPrice
पूरा विडीओ :-https://t.co/O7CpO3WNTP pic.twitter.com/W6tF1VPACA— Shyam Rangeela (@ShyamRangeela) June 17, 2021
ತಮ್ಮದೇ ಆದ ಲಕ್ಷಾಂತರ ಫಾಲೋವರ್ಸ್ ಬಳಗವನ್ನು ಹೊಂದಿರುವ , ಶ್ಯಾಮ್ ರಂಗೀಲಾ ಈ ಬಾರಿ ಪ್ರಧಾನಿ ಅವರಿಗೇ ಪ್ರತಿಸ್ಪರ್ಧಿ ಎಂದು ಬಿಂಬಿತವಾಗಿದ್ದರು.
ಮೇ 14ರಂದು ವಾರಾಣಸಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದ ಶ್ಯಾಮ್ ರಂಗೀಲಾ, ಚುನಾವಣಾಧಿಕಾರಿಯ ಕಚೇರಿಯಿಂದ ಹೊರಬರುತ್ತಿದ್ದಂತೆಯೇ ವಿಕ್ಟರಿ ಚಿಹ್ನೆಯನ್ನು ಪ್ರದರ್ಶಿಸಿದ್ದರು. ಆದರೆ ಅವರು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತವಾಗಿದೆ.
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ಶ್ಯಾಮ್ ರಂಗೀಲಾ, ‘ವಾರಣಾಸಿ ಹೋರಾಟಕ್ಕೆ ಅವಕಾಶ ನೀಡುವುದಿಲ್ಲ ಎಂಬುದು ಸ್ಪಷ್ಟವಾಗಿದೆ. ಹೃದಯವು ಖಂಡಿತವಾಗಿಯೂ ಒಡೆದುಹೋಗಿದೆ, ಆದರೆ ಧೈರ್ಯವು ಮುರಿಯುವುದಿಲ್ಲ. ನಿಮ್ಮೆಲ್ಲರ ಸಹಕಾರಕ್ಕೆ ಧನ್ಯವಾದಗಳು’ ಎಂದಿದ್ದಾರೆ.
वाराणसी से नहीं लड़ने देंगे ये तय था, अब साफ़ हो गया
दिल ज़रूर टूट गया है, हौंसला नहीं टूटा है ।
आप सबके सहयोग के लिए शुक्रिया ।
मीडिया और शुभचिंतकों से निवेदन है कृपया अभी कॉल ना करें, जो भी सूचना होगी यहाँ देता रहूँगा, शायद अब थोड़ी देर बातचीत करने की इच्छा नहीं है pic.twitter.com/aB6AZqLGqv— Shyam Rangeela (@ShyamRangeela) May 15, 2024
ಇದೀಗ ವಾರಣಾಸಿ ಕ್ಷೇತ್ರದಲ್ಲಿ ಪುನರಾಯ್ಕೆ ಬಯಸಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ ಸ್ಪರ್ಧೆಗಿಳಿದಿದ್ದಾರೆ. ಇವರಷ್ಟೇ ಅಲ್ಲ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 15 ಅಭ್ಯರ್ಥಿಗಳ ನಾಮಪತ್ರಗಳನ್ನು ಸ್ವೀಕೃತವಾಗಿವೆ ಎಂದು ಚುನಾವಣಾ ಆಯೋಗ ತಿಳಿಸಿದೆ.