ಧೂಳೆ (ಮಹಾರಾಷ್ಟ್ರ): ಈ ಬಾರಿಯಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದು ಕೇಂದ್ರದಲ್ಲಿ ಸರ್ಕಾರ ರಚಿಸಿದಲ್ಲಿ ಸಂವಿಧಾನ ಬದಲಾಯಿಸುವ ಸಾಧ್ಯತೆಗಳ ಬಗ್ಗೆ ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ.
ಮಹಾರಾಷ್ಟ್ರದ ಧೂಳೆಯಲ್ಲಿ ಭಾನುವಾರ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಆತಂಕ ಹೊರಹಾಕಿದ್ದಾರೆ.
70 ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಪದೇ ಪದೇ ಕೇಳುವ ಪ್ರಧಾನಿಯನ್ನು ತರಾಟೆಗೆ ತೆಗೆದುಕೊಂಡ ಅವರು, ನಾವು ದೇಶವನ್ನು ಉಳಿಸಿದ್ದೇವೆ ಮತ್ತು ರಕ್ಷಿಸಿದ್ದೇವೆ ಎಂದು ಉತ್ತರಿಸಿದರು. “ನಾವು ಪಾಕಿಸ್ತಾನವನ್ನು ವಿಭಜಿಸಿ ಬಾಂಗ್ಲಾದೇಶವನ್ನು ವಿಮೋಚನೆಗೊಳಿಸಿದ್ದೇವೆ” ಎಂದೂ ಅವರು ಹೇಳಿದರು, ಇಂದಿರಾ ಗಾಂಧಿಯವರು ದೇಶಕ್ಕಾಗಿ ತಮ್ಮ ಪ್ರಾಣವನ್ನು ಅರ್ಪಿಸಿದರು. “ನೀನು ಏನು ಮಾಡಿದ್ದೀರಿ?” ಎಂದು ಮೋದಿಯನ್ನು ಪ್ರಶ್ನಿಸಿದರು.