‘ಪ್ರತಿಷ್ಠೆ, ಅಧಿಕಾರದಿಂದ ಗೌರವ ಸಿಗಲ್ಲ, ಅದರ ಸದುಪಯೋಗ ಆದರೆ ತಾನಾಗೆ ಗೌರವ ಸಿಗುತ್ತೆ..’ ಬಿಜೆಪಿ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್
ಬೆಂಗಳೂರು: ಗ್ರಾಮ ಪಂಚಾಯತಿ ಸದಸ್ಯರೆ ಬಹುತೇಕ ನಿರ್ಣಾಯಕ ಮತ್ತು ಸ್ಥಳೀಯ ಶಕ್ತಿಯಾಗಿದೆ. ಪ್ರತಿಷ್ಠೆ, ಅಧಿಕಾರದಿಂದ ಗೌರವ ಸಿಗಲ್ಲ, ಅದರ ಸದುಪಯೋಗ ಆದರೆ ತಾನಾಗಿಯೇ ಗೌರವ ಸಿಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದ್ದಾರೆ.
ಬೆಂಗಳೂರಿನ ಯಲಹಂಕ ಸಮೀಪದ ಸಿಂಗನಾಯಕನಹಳ್ಳಿಯಲ್ಲಿ ಜನ ಪ್ರತಿನಿಧಿಗಳ ಪ್ರಶಿಕ್ಷಣ ವರ್ಗ ಸಭೆಯಲ್ಲಿ ಮಾರ್ಗದರ್ಶನ ಮಾಡಿದ ಸಂತೋಷ್.ವಿಧಾನ ಪರಿಷತ್, ವಿಧಾನಸಭೆಗೆ ಆಹ್ವಾನಕ್ಕೆ ದಾರಿ ಗ್ರಾಮ ಪಂಚಾಯತಿ, ವಿಧಾನ ಪರಿಷತ್ ಪ್ರವೇಶಿಸಲು ಇಚ್ಚೆ ಇರುವವರೆ ಹೆಚ್ಚಾಗಿ ಗ್ರಾಮ ಪಂಚಾಯತಿಗಳನ್ನ ಪ್ರವೇಶ ಕೊಡ್ತಾ ಇದ್ದಾರೆ ಎಂದರು.
ದೇಶದಲ್ಲಿ ಚೆಕ್ ಗೆ ಸಹಿ ಮಾಡುವ ಹಕ್ಕು ಇದು ಇರುವುದು ಕೇವಲ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಜಿಲ್ಲಾಧಿಕಾರಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಬೇರೆ ಯಾವ ಜನ ಪ್ರತಿನಿಧಿಗಳಿಗೆ ಯಾರಿಗು ಇಲ್ಲ, ಇದು ಸಂವಿಧಾನದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಗಮನಸೆಳೆದರು.
ಕಾಂಗ್ರೆಸ್ ನಮ್ಮ ಯೋಚನಾ ಶಕ್ತಿಯನ್ನೆ ಹಾಳು ಮಾಡುವುದು, ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಪಕ್ಷಪಾತ ಎಲ್ಲವೂ ಎಲ್ಲರಿಗು ಗೊತ್ತು ಅದ್ರೆ ಚುನಾಯಿತ ಪ್ರತಿನಿಧಿಗಳ ಯೋಚನಾ ಶಕ್ತಿಯನ್ನೆ ಹಾಳು ಮಾಡಿ, ಅವರ ದಿಕ್ಸೂಚಿಯನ್ನೆ ಬದಲಾಯಿಸಿದ್ದು ದುರಂತ ಎಂದು ಸಂತೋಷ್ ಹೇಳಿದರು.
ಗ್ರಾಮ ಪಂಚಾಯತಿ ಸದಸ್ಯರು ಅಧಿಕಾರ ಅನ್ನೋದು ಯಾವ ದೆಹಲಿ ನಾಯಕರಿಗೂ ಇಲ್ಲ. ಅಧಿಕಾರ ಅನ್ನೋದೆ ಸೇವೆ ಮಾಡಲಿಕ್ಕೆ, ಒಂದು ಮೈಕ್ ಮೂಲಕ ನೀರು ಬರುವುದನ್ನ ಜನರಿಗೆ ತಿಳಿಸಬಹುದು, ಜನ ಸಾಮಾನ್ಯರಿಗೆ ಹತ್ತಿರದಿಂದ ಸಮಸ್ಯೆ ನೋಡಲು ಅವಕಾಶ ಸಿಗ್ತಿದೆ, ಅದನ್ನ ಸದುಪಯೋಗ ಪಡಿಸಿಕೊಂಡು ಜನರಿಗೆ ಸಾಕಷ್ಟು ಸವಲತ್ತುಗಳನ್ನು ಕಲ್ಪಿಸಲು ಉತ್ತಮ ವೇದಿಕೆ ಅಗಲಿದೆ, ಅದನ್ನ ಒಳ್ಳೆಯದಕ್ಕೆ ಬಳಕೆ ಆಗಬೇಕಿದೆ ಎಂದು ಸಂತೋಷ್ ಪ್ರತಿಪಾದಿಸಿದರು.
ಪ್ರತಿಷ್ಠೆ, ಅಧಿಕಾರದಿಂದ ಗೌರವ ಸಿಗಲ್ಲ, ಅದನ್ನು ಸದುಪಯೋಗ ಪಡಿಸಿಕೊಂಡು ಬದಲಾವಣೆ ತರಬೇಕು. ಕಾರ್ಯರೂಪಕ್ಕೆ ಬಂದರೆ ಗೌರವ ತಾನಾಗೆ ಸಿಗುತ್ತೆ. ಗ್ರಾಮ ಪಂಚಾಯತಿಗಳು ದೇಶದ ಅಭಿವೃದ್ಧಿಗೆ ದಾರಿ ದೀಪ, ಮತದಾರರಿಗೆ ಸುಲಭವಾಗಿ ತಲುಪಬಹುದಾದ ಏಕೈಕ ವೇದಿಕೆ. ಜನರಿಗೆ ಒಳ್ಳೆಯದನ್ನು ಮಾಡುವ ಜವಾಬ್ದಾರಿ ಜನರಿಂದ ಆಯ್ಕೆಯಾದವರ ಮೇಲೆ ಇದೆ ಎಂದು ಅವರು ಜನಪ್ರತಿನಿಧಿಗಳಿಗೆ ಕಿವಿಮಾತು ಹೇಳಿದರು.
ಬಿ.ಡಿ.ಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮಾತನಾಡಿ, ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾದ್ಯ, ಆರ್ಥಿಕ, ಸಾಮಾಜಿಕ, ಬೌತಿಕ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಗ್ರಾಮದ ಸಾಕ್ಷರತೆ, ಆರ್ಥಿಕ ಬೆಳವಣಿಗಳು ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಅರುಣ್ ಕುಮಾರ್, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಬಿಜೆಪಿ ನಗರ ಅಧ್ಯಕ್ಷ ನಾರಾಯಣ್, ಕಡತನಮಲೆ ಸತೀಶ್, ಹನುಮೇಗೌಡ ಸೇರಿದಂತೆ ಅನೇಕ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.